ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಕೃಷಿ ವಿಜ್ಞಾನ ವೃತ್ತಿ ಮಾರ್ಗದರ್ಶನ ಕಾರ್ಯಗಾರ
ಕ್ರಿಸ್ಟಲ್ ಎಜುಕೇಶನ್ ಸರ್ವೀಸಸ್ ನ ಎಂ ಡಿ ಶ್ರೀ ಮಹೇಂದರ್ ಕುಮಾರ್ ಮಾತನಾಡಿ ವಿವಿಧ ಕೃಷಿ ಸಂಬಂಧಿತ ಅಧ್ಯಯನದ ಬಳಿಕ ಇರುವ ವಿಫುಲ ಉದ್ಯೋಗಾವಕಾಶಗಳ ಬಗ್ಗೆ ಸವಿಸ್ತಾರ ಮಾಹಿತಿ ನೀಡುವುದರ ಜೊತೆಗೆ ವಿದ್ಯಾರ್ಥಿಗಳ ಸಂದೇಹಗಳಿಗೆ ಪರಿಹಾರ ಸೂಚಿಸಿದರು.
ಈ ಸಂದರ್ಭದಲ್ಲಿ ಕ್ರಿಯೇಟಿವ್ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಶ್ರೀ ಅಶ್ವತ್ ಎಸ್ ಎಲ್, ಗಣಪತಿ ಭಟ್ ಕೆ ಎಸ್ ಮತ್ತು ಅಮೃತ್ ರೈ, ಸಾರ್ವಜನಿಕ ಸಂಪರ್ಕಾಧಿಕಾರಿ ಲಿಶನ್ ಗೌಡ, ಜಯಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು. ಜೀವಶಾಸ್ತ್ರ ಉಪನ್ಯಾಸಕ ಡಾ. ಆದಮ್ ಶೇಖ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.